ಹಾಯ್ ಗೆಳೆಯರೇ ನಿಮಗೆಲ್ಲ ಗೊತ್ತಿದೆ ಇತ್ತೀಚಿಗೆ ಮುಂದೆ ಸ್ಟೇ ನಡೆ ದಂತಹ ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಪೊಲೀಸರು ಮಿಂಚಿನ ವೇಗದಲ್ಲಿ ಬೇಧಿಸಿದ್ದು ಎಲ್ಲ ಕಡೆ ವೈರಲ್ ಆಗಿ ಉತ್ತಮ ಪ್ರತಿಕ್ರಿಯೆ ನೀಡಿದ್ದು ಕೇವಲ 86 ಗಂಟೆಗಳಲ್ಲಿ ಆರೋಪಿ ಗಳನ್ನು ಬಂಧಿಸುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಹೀಗಾಗಿ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಕರ್ನಾಟಕ ರಾಜ್ಯ ಸರ್ಕಾರ ಪೊಲೀಸ್ ತಂಡಕ್ಕೆ 5 ಲಕ್ಷ ರೂ.ಬಹುಮಾನ ಘೋಷಿಸಿದೆ. ಇದರ ಬೆನ್ನಲ್ಲೇ ಇದೀಗ ನಟ ಜಗ್ಗೇಶ್ ಸಹ ಬಹುಮಾನ ಘೋಷಿಸಿ ದ್ದಾರೆ. ಇದೇನಪ್ಪಾ ಅಂತೀರಾ ಹೌದು ಸಾಮಾಜಿಕ ಜಾಲತಾಣಗಳಲ್ಲಿ ಇದೆ ಒಂದು ನ್ಯೂಸ್ ಆಗಿದೆ ನವರಸ ನಾಯಕ ಜಗ್ಗೇಶ್ ತಮ್ಮ ಅನಿ ಸಿಕೆಗಳನ್ನು ವ್ಯಕ್ತ ಪಡಿಸಿ ಈ ಕುರಿತು ಟ್ವೀಟ್ ಮಾಡಿರುವ ಜಗ್ಗೇಶ್, ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ ಕಾಮ ಪಿಶಾಚಿ ಗಳನ್ನು ಬಂಧಿಸಿದ ನನ್ನ ಕರುನಾಡಿನ ಹೆಮ್ಮೆಯ ಆರಕ್ಷಕರಿಗೆ ವೈಯಕ್ತಿಕ ಅಭಿನಂದನೆಗಳು. ಐ ಆ್ಯಮ್ ಪ್ರೌಡ್ ಆಫ್ ಮೈ ಸ್ಟೇಟ್ ಪೊಲೀಸ್, ಪ್ರಕರಣ ಬೇಧಿಸಿದ ನಲ್ಮೆಯ ಪೋಲಿಸರಿಗೆ
ನನ್ನ ಕಡೆಯಿಂದ 1 ಲಕ್ಷ ರೂ. ಬಹುಮಾನ. ನಿಮ್ಮ ಸಾರ್ಥಕ ಸೇವೆ ಹೀಗೇ ಮುಂದುವರಿಯಲಿ, ರಾಷ್ಟ್ರಕ್ಕೆ ಮಾದರಿ ನಮ್ಮ ಪೋಲಿಸ್ ಎಂದು ಬರೆದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ
ಪ್ರಕರಣದ ಬಗ್ಗೆ ಈ ಹಿಂದೆ ಆಕ್ರೋಶ ವ್ಯಕ್ತಪಡಿಸಿದ್ದ ಜಗ್ಗೇಶ್, ಎಂಥ ಕ್ರೂರಿಗಳು, ತಾಯಿ ಹೆಣ್ಣಲ್ಲವೆ? ಅಕ್ಕ, ತಂಗಿ ಹೆಣ್ಣಲ್ಲವೆ? ಮಡದಿ ಹೆಣ್ಣಲ್ಲವೆ? ಹೆಣ್ಣು ಗೌರವಿಸದವರು ರಕ್ಕಸರು, ಈ ಕೃತ್ಯ ಎಸಗಿದ ಕ್ರೂರಿಗಳು ಗಲ್ಲು ಶಿಕ್ಷೆಗೆ ಅರ್ಹರು. ಈ ಕ್ರೂರ ಕೃತ್ಯಕ್ಕೆ ಖಂಡನೆ ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದರು.ಕರ್ನಾಟಕ ರಾಜ್ಯ ಪೊಲೀಸ್ ಅಧಿಕಾರಿಗಳು ಇದನ್ನು ಭೇದಿಸಿದಾಗ ಇದೀಗ ಪ್ರಕರಣ ಬೇಧಿಸಿದ ಪೊಲೀಸರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಬಹುಮಾನವನ್ನೂ ಘೋ ಷಿಸಿದ್ದಾರೆ ಈಗಾಗಲೇ ಪೊಲೀಸರ ಕಾರ್ಯ ಮೆಚ್ಚಿ ಸರ್ಕಾರ ತನಿಖಾ ತಂಡಕ್ಕೆ 5 ಲಕ್ಷ ರೂ. ಬಹುಮಾನ ಘೊಷಿಸಿದೆ.ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಆರೋಪಿಗಳನ್ನು
ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಸ್ಥಳದಲ್ಲಿದ್ದ ಬಿಯರ್ ಬಾಟ್ಲಿ, ಬಸ್ ಟಿಕೆಟ್ ಆಧರಿಸಿ ತನಿಖೆ ನಡೆಸಿ ಆರೋಪಿಗಳ ಹಡೆಮುರಿ ಕಟ್ಟಿದ್ದಾರೆ ಎಂದು ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಸ್ಥಳದಲ್ಲಿ ಸಿಕ್ಕ ಬಿಯರ್ ಬಾಟ್ಲಿ, ತಳವಾಡಿಯ ಬಸ್ ಟಿಕೆಟ್ ಮತ್ತು ಯುವಕನ ಹೇಳಿಕೆ ಆಧರಿಸಿ ತನಿಖೆ ನಡೆಸಿದ್ದರು. ಘಟನೆ ನಡೆಯುವ ಮೂರು ದಿನಗಳ ಮುಂಚೆ ಮತ್ತು ಒಂದು ದಿನದ ಹಿಂದೆ ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತ ಘಟನಾ ಸ್ಥಳಕ್ಕೆ ಬಂದಿರುವುದನ್ನು ಕಾಮಕರುಫಾಲೋ ಮಾಡಿದ್ದರು. ಘಟನೆ ನಡೆದ ದಿನದಿಂದ ಕಾಮುಕರು ಎಸ್ಕೇ ಪ್ ಆಗಿ ದ್ದರು, ಪೊಲೀಸರು ತನಿಖೆ ಮುಂದುವರಿಸಿ ಆರೋಪಿ ಗಳನ್ನು ಬಂಧಿ ಸುವಲ್ಲಿ ಯಶಸ್ವಿಯಾಗಿದ್ದಾರೆ. ನಿಮ್ಮ ಕರ್ನಾಟಕ ರಾಜ್ಯ ಪೊ ಲೀಸ್ ನಮ್ಮ ಹೆಮ್ಮೆ. ನಮ್ಮ ಪೊಲೀಸ್ ತಂಡಕ್ಕೆ ನನ್ನ ಗೌರವ ಸೂಚಿಸೋ ಣ ಮತ್ತು ಹೆಣ್ಣುಮಕ್ಕಳ ರಕ್ಷಣೆ ಮಾಡುವಲ್ಲಿ ನಾವು ಕೂಡ ಮುಂದಾ ಗೋಣ ಕೇವಲ ಆರಕ್ಷಕರು ಮಾತ್ರ ಕೆಲಸವಲ್ಲ ಪ್ರತಿಯೊಬ್ಬರ ಕೆಲಸ ಹೆಣ್ಣು ದೇಶದ ಕಣ್ಣು ಮನೆ ಕುಟುಂಬದ ಬೆಳಕು ಅವಳಿಲ್ಲದ ಪ್ರಪಂ ಚದ ಇಲ್ಲ.. ಹಾಗಾಗಿ ಹೆಣ್ಣಿನ ರಕ್ಷಣೆಯೇ ನಮ್ಮ ಧ್ಯೇಯ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಕಾಮೆಂಟ್ ಬಾಕ್ಸಲ್ಲಿ ಹಾಕಿಧನ್ಯವಾದಗಳು.